Monday, May 19, 2025
Homeಬೆಂಗಳೂರು ವಿಭಾಗರಾಮನಗರಆತ್ಮಹತ್ಯೆ ಮಾಡಿಕೊಂಡ ಪುನೀತ್ ಅಭಿಮಾನಿ ಮನೆಗೆ ರಾಘವೇಂದ್ರ ರಾಜಕುಮಾರ್‌ ಭೇಟಿ

ಆತ್ಮಹತ್ಯೆ ಮಾಡಿಕೊಂಡ ಪುನೀತ್ ಅಭಿಮಾನಿ ಮನೆಗೆ ರಾಘವೇಂದ್ರ ರಾಜಕುಮಾರ್‌ ಭೇಟಿ

ರಾಮನಗರ: ಪುನೀತ್ ರಾಜ್ ಕುಮಾರ್ ಅವರ ಸಾವಿನ ನೋವನ್ನು ತಡೆಯಲಾರದೆ ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಅಭಿಮಾನಿ ವೆಂಕಟೇಶ್‌ (25) ಮನೆಗೆ ನಟ ರಾಘವೇಂದ್ರ ರಾಜಕುಮಾರ್ ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪುನೀತ್‌ ರಾಜಕುಮಾರ್‌ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೆಂಕಟೇಶ್‌ ನ. 4ರಂದು ಆತ್ಮಹತ್ಯೆಗೆ ಶರಣಾಗಿದ್ದರು.

ಅವರ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದರು. ಅದನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವುಳ್ಳವರಿಗೆ ಕಸಿ ಮಾಡಲಾಗಿತ್ತು.

ವಿಷಯ ತಿಳಿದು ಭಾನುವಾರ ಎಲೆಕೇರಿಗೆ ಬಂದ ರಾಘವೇಂದ್ರ ರಾಜಕುಮಾರ್ ಅರ್ಧ ಗಂಟೆಗೂ ಹೆಚ್ಚು ಕಾಲ ವೆಂಕಟೇಶ್‌ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ನಿಮ್ಮ ಜೊತೆಗೆ ನಾವಿದ್ದೀವಿ, ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.